ADVERTISEMENT

ತಲ್ಲೂರು ಕೆರೆ: ಯಶ್‌ ಬಾಗಿನ ಇಂದು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2017, 9:01 IST
Last Updated 27 ನವೆಂಬರ್ 2017, 9:01 IST
ಯಲಬುರ್ಗಾ ತಾಲ್ಲೂಕಿನ ತಲ್ಲೂರು ಕೆರೆ ಸಂಪೂರ್ಣ ಭರ್ತಿಯಾಗಿರುವುದು
ಯಲಬುರ್ಗಾ ತಾಲ್ಲೂಕಿನ ತಲ್ಲೂರು ಕೆರೆ ಸಂಪೂರ್ಣ ಭರ್ತಿಯಾಗಿರುವುದು   

ಯಲಬುರ್ಗಾ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ತಲ್ಲೂರು ಕೆರೆ ಸಂಪೂರ್ಣ ಭರ್ತಿಯಾಗಿದ್ದು, ಚಿತ್ರನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್‌ ದಂಪತಿ ನ.27ರಂದು ಬೆಳಿಗ್ಗೆ 10.30ಕ್ಕೆ ಬಾಗಿನ ಅರ್ಪಿಸಲಿದ್ದಾರೆ.

‘ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯ ಅಭಿವೃದ್ಧಿಗೆ ಫೆ.28ರಂದು ಚಾಲನೆ ನೀಡಿದ್ದ ಯಶ್ ದಂಪತಿ ₹70 ಲಕ್ಷ ವೆಚ್ಚದಲ್ಲಿ ಹೂಳೆತ್ತುವ ಕೆಲಸ ಮಾಡಿಸಿದ್ದರು. ಇದರ ಪರಿಣಾಮ ಸುತ್ತಲಿನ ಹತ್ತಾರು ಹಳ್ಳಿಗಳ ಕೊಳೆವೆಬಾವಿಗಳ ಅಂತರ್ಜಲ ಹೆಚ್ಚಾಗಿದೆ.

ಈಗ ಕೆರೆಯ ಅಂಗಳದಲ್ಲಿ ಪಕ್ಷಿಗಳ ಕಲರವ ಶುರುವಾಗಿದೆ. ಕೆರೆ ವೀಕ್ಷಿಸಲು ಸಾಕಷ್ಟು ಜನರು ಬರುತ್ತಿದ್ದಾರೆ’ ಎಂದು ಪ್ರಗತಿಪರ ರೈತ ರಮೇಶ ಬಳೂಟಗಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.