ADVERTISEMENT

ಬಿಇಒ ಉಮಾದೇವಿ ಸೊನ್ನದ ಅಮಾನತು

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2017, 11:05 IST
Last Updated 16 ನವೆಂಬರ್ 2017, 11:05 IST

ಯಲಬುರ್ಗಾ: ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ ಅವರನ್ನು ಲಂಚದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ ಅಮಾನತು ಮಾಡಿ ಆದೇಶಿಸಿದ್ದಾರೆ.

ತಾಲ್ಲೂಕಿನ ಕುಕನೂರ ಪಟ್ಟಣದ ವಿದ್ಯಾಶ್ರೀ ಶಾಲೆಯ ನವೀಕರಣಕ್ಕೆ ಸಂಬಂಧಿಸಿದಂತೆ ₹10 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಸಂಸ್ಥೆಯ ಆಡಳಿತ ಮಂಡಳಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು. ಅದನ್ನು ಪರಶೀಲಿಸಿದ ಸಚಿವರು ಕ್ರಮಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಉಮಾದೇವಿ ಸೊನ್ನದ ಅವರು, ಅಕ್ಟೋಬರ್ 24ರಂದು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.