ADVERTISEMENT

ಮೈದಾನದಲ್ಲಿ ನೀರು, ಸ್ಪಂದಿಸದ ಆಡಳಿತ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2017, 7:17 IST
Last Updated 13 ಸೆಪ್ಟೆಂಬರ್ 2017, 7:17 IST

ಕನಕಗಿರಿ: ಪಟ್ಟಣದ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮಳೆ ನೀರು ನಿಂತು ಮಕ್ಕಳ ಆಟೋಟಕ್ಕೆ ತೊಂದರೆಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ನೀಲಕಂಠಗೌಡ ಪಾಟೀಲ ತಿಳಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಗೆ ಶಾಲೆಯ ಮೈದಾನದಲ್ಲಿ ನೀರು ನಿಂತಿದೆ. ಸಮಸ್ಯೆ ಕುರಿತು ಪಟ್ಟಣ ಪಂಚಾಯಿತಿಗೆ ದೂರು ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಪಕ್ಕದಲ್ಲಿ ಗಲೀಜು ವ್ಯವಸ್ಥೆ ಇದೆ. ವಿದ್ಯಾರ್ಥಿಗಳು ಸಾಂಕ್ರಾಮಿಕ ರೋಗಗಳ ಭೀತಿಯಿಂದ ಶಾಲೆಗೆ ಬರಬೇಕಾಗಿದೆ.

ಮೈದಾನದಲ್ಲಿ ಮಳೆ ನೀರು ಸಂಗ್ರಹದಿಂದ ಮಕ್ಕಳ ದೈಹಿಕ ಕಸರತ್ತಿನ ಚಟುವಟಿಕೆ ನಡೆಸಲು ಅನನುಕೂಲವಾಗಿದೆ. ಮಳೆ ನೀರು ಬೇರೆಡೆಗೆ ಹರಿಯಲು ವ್ಯವಸ್ಥೆ ಮಾಡುವಂತೆ ಅವರು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.