ಕೊಪ್ಪಳ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಆಶ್ರಯದಲ್ಲಿ ಸರ್ಕಾರಿ ವಾಹನಗಳ ಹೊಗೆ ಹೊರಸೂಸುವ ಪ್ರಮಾಣದ ತಪಾಸಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಜಿಲ್ಲಾಡಳಿತ ಭವನ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು.
ಸರ್ಕಾರದ ಸೂಚನೆಯಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸರ್ಕಾರಿ ವಾಹನಗಳು ಹೊರಸೂಸುವ ಹೊಗೆ ಪ್ರಮಾಣವನ್ನು ಗುರುತಿಸಿ, ಚಾಲಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿ ಕೊಳ್ಳಲಾಗಿದೆ. ಅಭಿಯಾನವು ಜಿಲ್ಲೆಯಲ್ಲಿ 15 ದಿನಗಳ ಕಾಲ ನಡೆಯಲಿದೆ. ಎಲ್ಲ ಇಲಾಖೆಗಳ ಸರ್ಕಾರಿ ವಾಹನಗಳನ್ನು ತಪ್ಪದೆ ತಪಾಸಣೆಗೆ ಒಳಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಪ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.