ADVERTISEMENT

ಏತ ನೀರಾವರಿಗಾಗಿ ಬಿಜೆಪಿ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2018, 10:01 IST
Last Updated 17 ಜನವರಿ 2018, 10:01 IST

ಕುಷ್ಟಗಿ: ಕೊಪ್ಪಳ ಏತ ನೀರಾವರಿಯ ತ್ವರಿತ ಅನುಷ್ಠಾನಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಎರಡನೇ ಬಾರಿಗೆ ರಾಜ್ಯ ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಪಾದಯಾತ್ರೆ ಮತ್ತು ಸಮಾವೇಶಕ್ಕೆ ಪಟ್ಟಣ ಸಜ್ಜುಗೊಂಡಿದೆ.

ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ, ಮುಖ್ಯ ರಸ್ತೆ ಇಕ್ಕೆಲಗಳಲ್ಲಿ ಬಿಜೆಪಿಯ ಯುವ ಮೋರ್ಚಾದ ಬೃಹತ್‌ ಬ್ಯಾನರ್‌ಗಳು, ಪಕ್ಷದ ಗಣ್ಯರನ್ನು ಸ್ವಾಗತಿಸುವ ಫ್ಲೆಕ್ಸ್‌ಗಳು, ಲಕ್ಷಾಂತರ ಬಂಟಿಂಗ್ಸ್‌ಗಳು, ಪಕ್ಷದ ಬಾವುಟ, ಕಟೌಟ್ಸ್‌ಗಳು ರಾರಾಜಿಸುತ್ತಿವೆ.

ಕೊಪ್ಪಳ ಏತ ನೀರಾವರಿಗೆ ಸಂಬಂಧಿಸಿದಂತೆ ತಾಲ್ಲೂಕಿನ ಕಲಾಲಬಂಡಿ ಗ್ರಾಮದ ಹೊರ ವಲಯದಲ್ಲಿರುವ ಮುಖ್ಯ ಸ್ಥಾವರ (ಡೆಲೆವರಿ ಚೇಂಬರ್‌) ಸ್ಥಳದಿಂದ ಬುಧವಾರ (ಜ 17) ಬಿಜೆಪಿ ಪಾದಯಾತ್ರೆ ಆರಂಭಗೊಳಲಿದೆ. ಬೆಳಿಗ್ಗೆ 9 ಗಂಟೆಗೆ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿರುವ ಸಂಸದ ಪ್ರತಾಪ್‌ ಸಿಂಹ ಚಾಲನೆ ನೀಡಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.