ADVERTISEMENT

ಕಾಮಗಾರಿ ಉದ್ಘಾಟನೆ: ಸಿ.ಎಂ ಭೇಟಿ ಇಂದು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2017, 6:18 IST
Last Updated 20 ಏಪ್ರಿಲ್ 2017, 6:18 IST

ಮಳವಳ್ಳಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದ ಅಂಗವಾಗಿ ಏ. 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಕಾರಣ ಪಟ್ಟಣದ ಶಾಂತಿ ಕಾಲೇಜಿನ ಎದುರು ಇರುವ 33 ಎಕರೆ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ತಾಲ್ಲೂಕಿನ ಬಿ.ಜಿ.ಪುರ ಹೋಬಳಿಯ 30 ಸಾವಿರ ಎಕರೆಗೆ ಹನಿ/ತುಂತುರು ನೀರಾವರಿ ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ₹ 12 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರಾಜ್ಯ ರಸ್ತೆ ಸಾರಿಗೆ ನಿಗಮದ ತರಬೇತಿ ಕೇಂದ್ರ ಸೇರಿದಂತೆ ಹಲವು ಯೋಜನೆಗಳ ಉದ್ಘಾಟನೆಗೆ ಬರುತ್ತಿದ್ದಾರೆ.

ಬೃಹತ್ ವೇದಿಕೆ, ಸಾವಿರಾರು ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಭಾಗವಹಿಸುವ ಎಲ್ಲರಿಗೂ ಊಟದ ವ್ಯವಸ್ಥೆಗೆ ಸಿದ್ಧತೆಗಳು ನಡೆದಿವೆ. 5 ದಿನಗಳಿಂದಲೇ ಸಿದ್ಧತೆಗಳು ನಡೆಯುತ್ತಿವೆ.ಕಾರ್ಯಕ್ರಮ ನಡೆಯುವ ವೇದಿಕೆ ಸ್ಥಳ ಮೈಸೂರು ರಸ್ತೆಯಲ್ಲಿ ಅನಂತರಾಂ ವೃತ್ತದಿಂದ ವೇದಿಕೆಯವರೆಗೂ ರಸ್ತೆ ವಿಭಜಕದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ, ಅಲ್ಲಲ್ಲಿ ಫ್ಲೆಕ್ಸ್‌ಗಳನ್ನು ಕಟ್ಟಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT