ADVERTISEMENT

ಗುಣಮಟ್ಟದ ರಸ್ತೆ ಅಭಿವೃದ್ಧಿಗೆ ಆದ್ಯತೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2017, 8:22 IST
Last Updated 14 ನವೆಂಬರ್ 2017, 8:22 IST

ಮದ್ದೂರು: ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ತಾಲ್ಲೂಕಿನಾದ್ಯಂತ ಗುಣಮಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು. ಸಮೀಪದ ಕುದರಗುಂಡಿ ಗ್ರಾಮದಲ್ಲಿ 23ನೇ ಬ್ಯಾಂಕ್‌ ನಾಲಾ ಮೇಲಿನ ನಾಲಾ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಬಹುದಿನಗಳಿಂದ ಈ ನಾಲೆ ರಸ್ತೆ ಹಾಳಾಗಿತ್ತು. ಇಲ್ಲಿನ ರೈತರ ಬೇಡಿಕೆ ಮೇರೆಗೆ ಮೊದಲ ಹಂತದಲ್ಲಿ ಬಿಡುಗಡೆಗೊಂಡ ₹ 10 ಕೋಟಿ ಅನುದಾನದಲ್ಲಿ ಕುದುರಗುಂಡಿಯಿಂದ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದ್ದು, ಈ ನಾಲೆಗೆ ₹ 2.4 ಕೋಟಿ ಬಿಡುಗಡೆಗೊಳಿಸಿ ಸುಧಾರಣಾ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.

2ನೇ ಹಂತದಲ್ಲಿ ಈ ಯೋಜನೆಯಡಿ ₹ 10 ಕೋಟಿ ಬಿಡುಗಡೆಗೊಂಡಿದ್ದು, ಈ ಅನುದಾನವನ್ನು ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ವಿನಿಯೋಗಿಸಲು ಯೋಜಿಸಿದ್ದೇನೆ ಎಂದು ತಿಳಿಸಿದರು.

ADVERTISEMENT

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಕೆ.ಎಂ.ಉಮೇಶ್, ಉದ್ಯಮಿ ಎಸ್.ಪಿ.ಸ್ವಾಮಿ, ಮುಖಂಡರಾದ ಕೆ.ಎಲ್.ಪ್ರಭು, ಕೆ.ಬಿ.ಸಿದ್ದೇಗೌಡ, ಶಿವರಾಮು, ಕೆ.ಜೆ.ಉಮೇಶ್‌, ಸತೀಶ್‌, ಸಿದ್ದಪ್ಪ, ರಾಕೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.