ADVERTISEMENT

ಚಂದ್ರವನದಲ್ಲಿ ಸಂಸದ ಪುಣ್ಯ ಸ್ನಾನ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2017, 6:47 IST
Last Updated 20 ಸೆಪ್ಟೆಂಬರ್ 2017, 6:47 IST
ಶ್ರೀರಂಗಪಟ್ಟಣ ಸಮೀಪದ ಚಂದ್ರವನ ಆಶ್ರಮ ಬಳಿಯ ಕಾವೇರಿ ನದಿಯಲ್ಲಿ ಸಂಸದ ಸಿ.ಎಸ್‌.ಪುಟ್ಟರಾಜು (ಬಲದಿಂದ ನಾಲ್ಕನೇಯವರು) ಮಂಗಳವಾರ ಪುಣ್ಯ ಸ್ನಾನ ಮಾಡಿ ಪೂಜೆ ಸಲ್ಲಿಸಿದರು
ಶ್ರೀರಂಗಪಟ್ಟಣ ಸಮೀಪದ ಚಂದ್ರವನ ಆಶ್ರಮ ಬಳಿಯ ಕಾವೇರಿ ನದಿಯಲ್ಲಿ ಸಂಸದ ಸಿ.ಎಸ್‌.ಪುಟ್ಟರಾಜು (ಬಲದಿಂದ ನಾಲ್ಕನೇಯವರು) ಮಂಗಳವಾರ ಪುಣ್ಯ ಸ್ನಾನ ಮಾಡಿ ಪೂಜೆ ಸಲ್ಲಿಸಿದರು   

ಶ್ರೀರಂಗಪಟ್ಟಣ: ಸಂಸದ ಸಿ.ಎಸ್‌. ಪುಟ್ಟರಾಜು ಮಂಗಳವಾರ ಸಮೀಪದ ಚಂದ್ರವನ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರು. ಮಧ್ಯಾಹ್ನ ಸ್ಥಳೀಯ ಜೆಡಿಎಸ್‌ ಮುಖಂಡರ ಜತೆಗೂಡಿ ಇಲ್ಲಿಗೆ ಬಂದ ಪುಟ್ಟರಾಜು ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ಅರ್ಪಿಸಿದರು.

ಬೇಬಿ ಮಠದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಆರತಿ ಬೆಳಗಿದರು. ಜೆಡಿಎಸ್‌ ರಾಜ್ಯ ಘಟಕ ಉಪಾಧ್ಯಕ್ಷ ಎಂ.ಸಂತೋಷ್‌, ಕ್ಷೇತ್ರದ ಅಧ್ಯಕ್ಷ ಪೈ.ಮುಕುಂದ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್‌ ಕೂಡ ಪುಣ್ಯ ಸ್ನಾನ ಮಾಡಿದರು.

ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮಾತನಾಡಿ, ‘ಕಾವೇರಿ ನದಿ ಹರಿಯುವ ತಾಣಗಳಲ್ಲಿ ಮಹಾ ಪುಷ್ಕರ ಜರುಗುತ್ತಿದೆ. ಸೆ. 20ರಂದು ಚಂದ್ರವನದಲ್ಲಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.