ಮಳವಳ್ಳಿ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಜ್ವರದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಭೇಟಿ ನೀಡಿದ್ದು, ಪರಿಸ್ಥಿತಿ ಹಾಗೂ ಸೌಲಭ್ಯವನ್ನು ಪರಿಶೀಲಿಸಿದರು. ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೂ ಭೇಟಿ ನೀಡಿದ್ದ ಅವರು, ರೋಗಿಗ ಳಿಂದಲೂ ಮಾಹಿತಿ ಪಡೆದರು. ವೈದ್ಯರ ಜೊತೆಗೆ ಪರಿಸ್ಥಿತಿ ಕುರಿತು ಚರ್ಚಿಸಿದರು.
‘ತಾಲ್ಲೂಕಿನಲ್ಲಿ ಡೆಂಗಿ ಜ್ವರದ ಸಮಸ್ಯೆ ಹೆಚ್ಚಿದೆ. ಎಲ್ಲವೂ ಡೆಂಗಿ ಅಲ್ಲ. ಜನರು ಆತಂಕಕ್ಕೆ ಒಳಗಾಗುವುದು ಬೇಡ’ ಎಂದು ಸಲಹೆ ಮಾಡಿದರು. ಆಸ್ಪತ್ರೆಯಲ್ಲಿ ಇರುವ ರಕ್ತ ಪರೀಕ್ಷೆ ಯಂತ್ರ ಸದ್ಯ ಕೆಟ್ಟಿದೆ. ಎರಡು ದಿನದಲ್ಲಿ ಇದನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಪುರುಷರ ವಾರ್ಡ್ನಲ್ಲಿ ಫ್ಯಾನ್,ದೀಪದ ಸಮಸ್ಯೆ ಇದೆ ಎಂಬ ದೂರಿದೆ. ಕೂಡಲೇ ಸರಿಪಡಿಸಬೇಕು ಎಂದು ಆಡಳಿತಾಧಿಕಾರಿ ಮಹದೇವ ನಾಯಕ್ಗೆ ಸೂಚಿಸಿದರು.
ಆಡಳಿತ ವೈದ್ಯಾಧಿಕಾರಿ ಡಾ. ವೀರಭದ್ರಪ್ಪ, ತಾಲ್ಲೂಕಿನ ಎಲ್ಲ ಪ್ರಾಥ ಮಿಕ ಆರೋಗ್ಯ ಕೇಂದ್ರದಲ್ಲಿ ಸೌಲಭ್ಯ ಕಲ್ಪಿಸಬೇಕು ಎಂದು ಸಲಹೆ ಮಾಡಿದರು.
ಪುರಸಭೆ ಅಧ್ಯಕ್ಷ ರಿಯಾಜಿನ್, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಅವರಿಗೂ ಸ್ವಚ್ಛತೆ ಕುರಿತು ಗಮನ ಹರಿಸಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಹನುಮಂತು, ಚಂದ್ರಕುಮಾರ, ಎಪಿಎಂಸಿ ಅಧ್ಯಕ್ಷ ಅಂಬರೀಶ್, ತಾಪಂ ಉಪಾಧ್ಯಕ್ಷ ಮಾಧು ಹಾಜರಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.