ADVERTISEMENT

ಮೇವು ಅರಸಿ ಬಂದ ಜಿಂಕೆ ಸಾವು

​ಪ್ರಜಾವಾಣಿ ವಾರ್ತೆ
Published 25 ಮೇ 2017, 6:20 IST
Last Updated 25 ಮೇ 2017, 6:20 IST
ಜಿಂಕೆಯ ಮೃತ ದೇಹ
ಜಿಂಕೆಯ ಮೃತ ದೇಹ   

ಮಂಡ್ಯ: ತಾಲ್ಲೂಕಿನ ಬಸರಾಳು ಗ್ರಾಮದ ಹೊರವಲಯದಲ್ಲಿ ಜಿಂಕೆಯೊಂದು ಮೃತಪಟ್ಟಿರುವುದು ಬುಧವಾರ ಬೆಳಕಿಗೆ ಬಂದಿದೆ.

ಜಿಂಕೆಯು ಆಹಾರ ಅರಸಿ ಬಂದಿದೆ. ಯಾರೋ ದುಷ್ಕರ್ಮಿಗಳು ಅದನ್ನು ಕೊಂದು ಗ್ರಾಮದ ಹೊರವಲಯದ ಪಾಳು ಗುಂಡಿಯಲ್ಲಿ ತೆಂಗಿನ ಗರಿ ಸಮೇತ ಮುಚ್ಚಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದರು. ಜಿಂಕೆಯ ಕಳೇಬರವನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಜಾರ್ಜ್ ವಿಲ್ಸನ್‌ ತಿಳಿಸಿದರು.

ಪಂಚನಾಮೆ ನಡೆಸಿದ ನಂತರ ಸತ್ಯಾಂಶ ಹೊರ ಬರಲಿದೆ ಎಂದು ಮಂಡ್ಯ ಉಪವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.