ಮಂಡ್ಯ: ‘ವೈದ್ಯರ ಮುಷ್ಕರದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ಗೆ ಮುಖಂಡರಿಗೆ ನಮ್ಮ ವಿರುದ್ಧ ಟೀಕೆ ಮಾಡುವ ನೈತಿಕ ಹಕ್ಕು ಇಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮೈಸೂರಿಗೆ ತೆರಳುವ ಮಾರ್ಗಮಧ್ಯೆ ನಗರದಲ್ಲಿ ಭಾನುವಾಋ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಮಗೆ ಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ರಮೇಶ್ಕುಮಾರ್ ಟೀಕೆ ಮಾಡಿದ್ದಾರೆ. ಆದರೆ ಅವರು ಜನರ ಆರೋಗ್ಯದ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ’ ಎಂದು ದೂರಿದರು.
ರಾಜ್ಯದಲ್ಲಿ ಮದ್ಯ ಮಾರಾಟ ನಿಷೇದ ಪ್ರಸ್ತಾವ ಕುರಿತ ಪಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಮದ್ಯ ಮಾರಾಟವಾದರೆ ಸ್ವಾಗತ. ಮೊದಲು ಮದ್ಯ ಮಾರಾಟ ನಿಷೇಧ ಮಾಡಿ ನಂತರ ಮಾತನಾಡಬೇಕು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.