ADVERTISEMENT

ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2017, 6:41 IST
Last Updated 6 ಸೆಪ್ಟೆಂಬರ್ 2017, 6:41 IST

ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ತಾಲ್ಲೂಕಿನ ಕಿರುನೆಲ್ಲಿ, ಮೆಲ್ಲಹಳ್ಳಿ, ಚಿಟ್ಟೇನಹಳ್ಳಿ, ಕಂಪಲಾಪುರ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.

ಪಟ್ಟಣದ ಬಸವೇಶ್ವರ ವೃತ್ತದ ಬಳಿ ಆನೇಚೌಕೂರು ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ರಸ್ತೆಯಲ್ಲಿ ಭಾರಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು,

ಪಟ್ಟಣದ ತಗ್ಗು ಪ್ರದೇಶದಲ್ಲಿರುವ ಹಂದಿ ಜೋಗಿ ಕಾಲೋನಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ನೀರು ಹೊರಹಾಕಲು ಹರಸಾಹಸ ಪಟ್ಟರು. ಪಟ್ಟಣದ ಬಸ್ ನಿಲ್ದಾಣದ ಚಾವಣಿ ಸೋರಿ ಪ್ರಯಾಣಿಕರು ಪರದಾಡುವಂತಾಯಿತು.
 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.