ನಂಜನಗೂಡು: ತಾಲ್ಲೂಕಿನ ರಾಜೂರು ಗ್ರಾಮದ ಸಿದ್ದರಾಜು ಎಂಬುವವರ ಕಬ್ಬಿನ ಗದ್ದೆಗೆ ಶುಕ್ರವಾರ ತಡರಾತ್ರಿ ನುಗ್ಗಿದ ಕಾಡಾನೆಗಳು ಮೂರು ಎಕರೆಯಲ್ಲಿ ಬೆಳೆದಿದ್ದ ಫಸಲು ನಾಶಪಡಿಸಿವೆ. ಅಲ್ಲದೆ, ಕೊಳವೆಬಾವಿ ಪಂಪ್ ಸೆಟ್ ನಾಶಪಡಿಸಿವೆ. ಇದೇ ಗ್ರಾಮದ ಬಸವೇಗೌಡ ಎಂಬುವವರು ಬೆಳೆದಿದ್ದ ಸೌತೆಕಾಯಿ ಫಸಲು ಕೂಡ ನಾಶವಾಗಿದೆ.
‘ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಕಷ್ಟಪಟ್ಟ ಬೆಳೆದ ಬೆಳೆ ಉಳಿಸಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಆನೆ ದಾಳಿಯಿಟ್ಟಿರುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದರೂ ಸ್ಥಳಕ್ಕೆ ಬಂದಿಲ್ಲ. ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು’ ಎಂದು ರೈತ ಸಿದ್ದರಾಜು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.