ಮೈಸೂರು: ಇಲ್ಲಿನ ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಭಾನುವಾರ ಮೊಸಳೆಯೊಂದು ಮೃತಪಟ್ಟಿದೆ.
ಭಾನುವಾರ ಬೆಳಿಗ್ಗೆ ವಾಯುವಿಹಾರಕ್ಕೆ ಹೋದವರು ಮೊಸಳೆಯು ತೇಲುತ್ತಿ ರುವುದನ್ನು ಕಂಡಿದ್ದಾರೆ. ಈ ವಿಷಯವನ್ನು ಕೆರೆಯ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ.
ಸ್ಥಳಕ್ಕೆ ಬಂದ ಪಶುವೈದ್ಯಾಧಿಕಾರಿ ಡಾ.ನಾಗರಾಜ್ ಅವರು ಮೊಸಳೆ ಮೃತಪಟ್ಟಿರುವುದನ್ನು ಖಚಿತಪಡಿಸಿದರು. ಮರಣೋತ್ತರ ಪರೀಕ್ಷೆ ನಡೆಸಿದ ಅವರು, ಅನಾರೋಗ್ಯದಿಂದ ಮೊಸಳೆ ಆಹಾರ ಸೇವಿಸಿಲ್ಲ. ಎರಡು ದಿನಗಳ ಹಿಂದೆಯೇ ಇದು ಮೃತಪಟ್ಟಿರಬಹುದು. ಇದರ ಹೃದಯ, ಕಿಡ್ನಿ, ಯಕೃತ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.