ADVERTISEMENT

ನಾನೂ ಕೆ.ಆರ್‌.ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ: ಮಾಳವಿಕಾ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 11:48 IST
Last Updated 21 ಮಾರ್ಚ್ 2018, 11:48 IST

ಮೈಸೂರು: ‘ನಾನು ಕೂಡಾ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ನನ್ನ ಸ್ಪರ್ಧೆಯ ಬಗ್ಗೆ ರಾಜ್ಯದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಾಧ್ಯಮ ಕೇಂದ್ರ ಆರಂಭಿಸು ವುದಕ್ಕೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಅವರು ಮಂಗಳವಾರ ನಗರಕ್ಕೆ ಬಂದಿದ್ದರು. ‘ಪಕ್ಷವನ್ನು ಸಂಘಟಿಸುತ್ತಿದ್ದು, ಟಿಕೆಟ್‌ ದೊರೆ ತರೆ ಸ್ಪರ್ಧಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಕೆ.ಆರ್‌. ಕ್ಷೇತ್ರದಿಂದ ಟಿಕೆಟ್‌ ಗಿಟ್ಟಿಸಲು ಬಿಜೆಪಿಯ ಎಸ್‌.ಎ.ರಾಮದಾಸ್‌, ಎಚ್‌.ವಿ.ರಾಜೀವ್‌, ಶಿವಪ್ರಕಾಶ್‌, ಫಣೀಶ್‌ ಅವರು ಪೈಪೋಟಿ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.