ADVERTISEMENT

‘ರಾಜಕಾರಣಿಗಳು ನಿರ್ಣಯಿಸಬಾರದು’

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 11:47 IST
Last Updated 21 ಮಾರ್ಚ್ 2018, 11:47 IST

ಮೈಸೂರು: ಧರ್ಮ ಹೇಗಿರಬೇಕು ಎಂಬುದನ್ನು ನಿರ್ಣ ಯಿಸುವಂತಹ ಯೋಗ್ಯತೆ ರಾಜಕೀಯ ನೇತೃತ್ವಕ್ಕೆ ಇನ್ನೂ ಬಂದಿಲ್ಲ ಎಂದು ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ಮಂಗಳವಾರ ಇಲ್ಲಿ ಹೇಳಿದರು.

ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮದ ಬಗ್ಗೆ ನಿರ್ಣಯವನ್ನು ಧಾರ್ಮಿಕ ಮುಖಂಡರೇ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಬಸವಣ್ಣ ಮತ್ತು ಕನಕದಾಸ ಅವರನ್ನು ಹಿಂದೂ ಧರ್ಮದಿಂದ ಬೇರೆ ಮಾಡಲು ಜಗತ್ತಿನ ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಅವರಿಬ್ಬರೂ ಹಿಂದೂ ಧರ್ಮದ ಸುಧಾರಕರಾಗಿದ್ದು, ಹಿಂದೂ ಧರ್ಮದ ತತ್ವಗಳನ್ನು ಜಗತ್ತಿಗೆ ಸರಳ ರೂಪದಲ್ಲಿ ತಿಳಿಸಿಕೊಟ್ಟವರು. ಅವರನ್ನು ಹಿಂದೂ ಧರ್ಮದಿಂದ ಬೇರ್ಪಡಿಸಲು ನಡೆಯುವ ಷಡ್ಯಂತ್ರಗಳು ವಿಫಲವಾಗಲಿವೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.