ಮೈಸೂರು: ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಕ್ರೈಸ್ತರ ಪ್ರಮಾಣ ಶೇ 4ರಷ್ಟಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 12 ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಲ್ಲಿ ಮಂಗಳವಾರ ಆಗ್ರಹಿಸಿದರು.
ಕ್ರೈಸ್ತರು ಮತ್ತು ಮಸ್ಲಿಮರು ಸೇರಿ ರಾಜ್ಯದಲ್ಲಿ ಒಟ್ಟು ಶೇ 17ರಷ್ಟು ಅಲ್ಪಸಂಖ್ಯಾತರು ಇದ್ದಾರೆ. ಈ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು ಎಂದು ಸುದ್ದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್ ಕಾರ್ಯಕರ್ತರಿಗೆ ಹುರುಪು: ‘ಗುಜರಾತ್ನಲ್ಲಿ ಕಾಂಗ್ರೆಸ್ಗೆ ಅಧಿಕಾರ ದೊರೆತಿಲ್ಲ. ಆದರೆ ನಾವೇ ಗೆದ್ದಿದ್ದೇವೆ ಎನ್ನಬಹುದು. ಅಲ್ಲಿ 23 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಕೇಂದ್ರದಲ್ಲಿ ಅವರದ್ದೇ ಸರ್ಕಾರವಿದೆ. ಅದೇ ರಾಜ್ಯದ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಆದರೂ ನಮಗೆ 80 ಸೀಟುಗಳು ಲಭಿಸಿವೆ. ಇದು ಸಣ್ಣ ವಿಷಯವಲ್ಲ’ ಎಂದರು.
‘ಗುಜರಾತ್ ಚುನಾವಣೆಗೂ ರಾಜ್ಯದ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಅಲ್ಲಿ ನಮಗೆ ನಾಯಕತ್ವದ ಕೊರತೆಯಿತ್ತು. ಇಲ್ಲಿ ಸಿದ್ದರಾಮಯ್ಯ ಅವರ ಸಮರ್ಥ ನಾಯಕತ್ವ ಇದೆ. ಜನರಿಗೆ ಕೊಟ್ಟ ಎಲ್ಲ ಆಶ್ವಾಸನೆಗಳನ್ನು ಸರ್ಕಾರ ಈಡೇರಿಸಿದೆ. ಬಿಜೆಪಿಯಲ್ಲಿ ಸಮರ್ಥ ನಾಯಕರು ಇಲ್ಲ. ಇರುವ ನಾಯಕರು ಜೈಲಿಗೆ ಹೋಗಿ ಬಂದವರು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.