ADVERTISEMENT

ಒಳಮೀಸಲಾತಿಗೆ ಕುಂಬಾರರ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಜನವರಿ 2018, 5:13 IST
Last Updated 6 ಜನವರಿ 2018, 5:13 IST

ಮೈಸೂರು: ಹಿಂದುಳಿದ ವರ್ಗಗಳಲ್ಲಿಯೂ ಒಳಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಕುಂಬಾರರ ಯುವ ಸೈನ್ಯ ಶುಕ್ರವಾರ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಎದುರು ಮಡಿಕೆ ತಯಾರಿಸುವ ಮೂಲಕ ಪ್ರತಿಭಟನಾಕಾರರು ಗಮನ ಸೆಳದರು.

ಹಿಂದುಳಿದ ವರ್ಗಗಳ ಪ್ರವರ್ಗ ‘2 ಎ’ ಅಡಿ ಕುಂಬಾರರು ಮೀಸಲಾತಿ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಇಲ್ಲಿ ಅನೇಕ ಪ್ರಬಲ ಜಾತಿಗಳಿದ್ದು, ಕುಂಬಾರರಿಗೆ ಸಿಗಬೇಕಾದ ಸೌಲಭ್ಯಗಳು ಅನ್ಯರ ಪಾಲಾಗುತ್ತಿವೆ. ಇವರೊಂದಿಗೆ ಸ್ಪರ್ಧಿಸುವ ಸಾಮರ್ಥ್ಯ ಇಲ್ಲವಾಗಿದೆ. ಹೀಗಾಗಿ, ವಿಶೇಷ ಅಥವಾ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT