ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕಂಚಮಳ್ಳಿ ಗ್ರಾಮದ ನಾಗರಾಜು ಅವರ ಪುತ್ರ ಅಜಯ್ (10) ಹಾಗೂ ಸುಜಾತ ಅವರ ಪುತ್ರ ಸಾಗರ್ (10) ಕಂಚಮಳ್ಳಿ ಕೆರೆ ಆವರಣದಲ್ಲಿದ್ದ ಗುಂಡಿಯಲ್ಲಿ ಮುಳುಗಿ ಬುಧವಾರ ಮೃತಪಟ್ಟಿದ್ದಾರೆ.
ಇವರು ಕೆರೆ ಆವರಣದಲ್ಲಿನ ಗುಂಡಿಯಲ್ಲಿ ನೀರು ತೆಗೆದುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಗುಂಡಿಯು ಸುಮಾರು 10 ಅಡಿಗೂ ಹೆಚ್ಚು ಆಳವಿದ್ದು, ಈಚೆಗೆ ಕಾಲುವೆ ನೀರಿನಿಂದ ತುಂಬಿತ್ತು. ಬೆಳಿಗ್ಗೆ 11 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ಆಸುಪಾಸಿನಲ್ಲಿ ಜನ ಸಂಚಾರ ವಿರಳವಾಗಿರುವುದರಿಂದ ಘಟನೆ ಯಾರ ಗಮನಕ್ಕೂ ಬಂದಿಲ್ಲ. ಸಂಜೆಯಾದರೂ ಮಕ್ಕಳು ಮನೆಗೆ ಹಿಂದಿರುಗದೇ ಇದ್ದುದರಿಂದ ಆತಂಕಗೊಂಡ ಪೋಷಕರು ಹುಡುಕಾಟ ನಡೆಸಿದಾಗ ಗುಂಡಿಯಲ್ಲಿ ಮಕ್ಕಳ ಮೃತದೇಹಗಳು ಇದ್ದದ್ದು ಪತ್ತೆಯಾಗಿದೆ.
ಬಾಲಕರು ಕಂಚಮಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.