ADVERTISEMENT

ಕರ್ತವ್ಯದೊಂದಿಗೆ ಆರೋಗ್ಯದ ಕಾಳಜಿಯೂ ಅಗತ್ಯ

ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿ ಕ್ರಿಷ್ಟಪ್ಪ ಸಲಹೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2018, 13:29 IST
Last Updated 3 ಏಪ್ರಿಲ್ 2018, 13:29 IST
ರಾಯಚೂರಿನಲ್ಲಿ ಸೋಮವಾರ ನಡೆದ ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಪೊಲೀಸ್‌ ಉಪ ನಿರೀಕ್ಷಕ ಕ್ರಿಷ್ಟಪ್ಪ ಪೊಲೀಸ್ ಧ್ವಜ ದಿನದ ಸ್ಟಿಕ್ಕರ್ ಬಿಡುಗಡೆ ಮಾಡಿದರು
ರಾಯಚೂರಿನಲ್ಲಿ ಸೋಮವಾರ ನಡೆದ ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಪೊಲೀಸ್‌ ಉಪ ನಿರೀಕ್ಷಕ ಕ್ರಿಷ್ಟಪ್ಪ ಪೊಲೀಸ್ ಧ್ವಜ ದಿನದ ಸ್ಟಿಕ್ಕರ್ ಬಿಡುಗಡೆ ಮಾಡಿದರು   

ರಾಯಚೂರು: ಪೊಲೀಸ್‌ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ ಎಂದು ನಿವೃತ್ತ ಪೊಲೀಸ್‌ ಅಧಿಕಾರಿ ಕ್ರಿಷ್ಟಪ್ಪ ಸಲಹೆ ನೀಡಿದರು.ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ಯಿಂದ ಸೋಮವಾರ ಆಯೋಜಿಸಿದ್ದ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಪೊಲೀಸರು ಹಗಲಿರುಳು ಸಾರ್ವಜನಿಕರ ಸ್ವತ್ತು ರಕ್ಷಣೆ ಮಾಡಿ, ಸಮಾಜದಲ್ಲಿ ಶಾಂತಿ ಕಾಪಾಡು ತ್ತಾರೆ. ಆದರೆ, ಆರೋಗ್ಯವನ್ನು ಕಾಪಾಡಿ ಕೊಳ್ಳುವುದರಿಂದ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ ಎಂದರು.ಸಮಾಜದಲ್ಲಿ ಪೊಲೀಸ್ ಇಲಾಖೆಗೆ ಇರುವ ಗೌರವ ಹಾಗೂ ಘನತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೊಲೀಸರು ಕಾರ್ಯನಿರ್ವಹಿಸುವ ಮೂಲಕ ಸಮಾಜದ ರಕ್ಷಣೆ ಮಾಡಬೇಕು. ನಿವೃತ್ತಿಯಾದವರಿಂದ ಅನುಭವ ಪಡೆ ದರೆ ದಕ್ಷತೆಯಿಂದ ಕೆಲಸ ಮಾಡಲು ಸಹ ಕಾರಿಯಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾತನಾಡಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಪೊಲೀಸರ ಕಾರ್ಯ ಅನನ್ಯವಾಗಿದ್ದು, ಸಮಾಜದ ರಕ್ಷಣೆ ಮಾಡುವಂತಹ ಪೊಲೀಸರಿಗೆ ಎಲ್ಲರೂ ಸಹಕಾರ ಮಾಡಬೇಕು ಎಂದು ಹೇಳಿದರು.ಪೊಲೀಸ್‌ ಇಲಾಖೆಯ ನೀತಿ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುವ ಪೊಲೀಸರಿಗೆ ಸಾರ್ವಜನಿಕರು ಸಹಕಾರ ಕಲ್ಪಿಸಿದರೆ ಅಹಿತಕರ ಘಟನೆಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಪೊಲೀಸರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವುದರಿಂದ ಉತ್ತಮವಾಗಿ ಕರ್ತವ್ಯ ನಿರ್ವಹಣೆಗೆ ಅನಕೂಲವಾಗಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಭಿರಾಂ ಜಿ.ಶಂಕರ್‌ ಮಾತನಾಡಿ, ‘ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸಲು ಆರೋಗ್ಯದಿರುವುದು ಅಗತ್ಯ ಎಂದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಮಾತನಾಡಿ, ಪೊಲೀಸ್‌ ಧ್ವಜ ದಿನಾಚರಣೆ ಆಚರಣೆಯ ಬಗ್ಗೆ ಹಾಗೂ 2017–18ನೇ ಸಾಲಿನಲ್ಲಿ ನಿವೃತ್ತಿ ಹೊಂದಿದ ಪೊಲೀಸರ ಕುರಿತು ವಿವರಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಪಾಟೀಲ್ ಇದ್ದರು.

**

ಸಮಾಜದಲ್ಲಿ ಶಾಂತಿ ಸುವವ್ಯಸ್ಥೆ ನೆಲೆಸಬೇಕಾದರೆ ಪೊಲೀಸ್‌ ಇಲಾಖೆಯು ತುಂಬಾ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಜನರು ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಬೇಕು – ಡಾ.ಬಗಾದಿ ಗೌತಮ್‌, ಜಿಲ್ಲಾಧಿಕಾರಿ

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.