ADVERTISEMENT

ನಟ ಸತ್ಯರಾಜ್‌ ಕ್ಷಮೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2017, 6:20 IST
Last Updated 21 ಏಪ್ರಿಲ್ 2017, 6:20 IST

ರಾಯಚೂರು: ಕನ್ನಡಿಗರ ಭಾವನೆಗೆ ಧಕ್ಕೆ ತಂದಿರುವ ಬಾಹುಬಲಿ-2 ಸಿನಿಮಾದಲ್ಲಿ ನಟಿಸಿರುವ ನಟ ಸತ್ಯರಾಜ್‌ ಅವರು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಎಚ್‌.ಶಿವರಾಮೇಗೌಡ ಬಣ) ಜಿಲ್ಲಾ ಘಟಕದ ಸದಸ್ಯರು ಗುರುವಾರ ಸತ್ಯರಾಜ ಅವರ ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿದರು.

ತೀನ್ ಕಂದಿಲ್‌ನಿಂದ ಪೂರ್ಣಿಮಾ ಚಿತ್ರಮಂದಿರದವರೆಗೆ   ಶವಯಾತ್ರೆ ನಡೆಸಲಾಯಿತು.  ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರ ಬಗ್ಗೆ ಸತ್ಯರಾಜ್‌ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.  ಸತ್ಯರಾಜ್‌ ಅವರು ಬಹಿರಂಗ ಕ್ಷಮೆ ಯಾಚಿಸುವವರೆಗೆ ರಾಜ್ಯದಲ್ಲಿ ಬಾಹುಬಲಿ–2 ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಘಟಕ ಅಧ್ಯಕ್ಷ ಅಶೋಕ ಕುಮಾರ ಜೈನ್, ಗೋವಿಂದರಾಜ್, ಕೆ.ಕಿಶನರಾವ್, ಆಸೀಫ್, ಆನಂದ ಸ್ವಾಮಿ, ಶ್ರೀನಿವಾಸ, ಮಲ್ಲಿಕಾರ್ಜುನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT