ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪರಣ್ಣ ಮುನವಳ್ಳಿ ಪ್ರಯಾಣಿಸುತ್ತಿದ್ದ ಕಾರು ಹರಿದು ಬಾಲಕನೊಬ್ಬ ತೀವ್ರಗಾಯಗೊಂಡು ಚಿಕಿತ್ಸೆಗೆ ದಾಖಲಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಶುಕ್ರವಾರ ಮುಕ್ಕುಂಪಿ ಬಳಿ ನಡೆದಿದೆ.
ಘಟನೆಯಲ್ಲಿ ಬಸವರಾಜ ಯಲ್ಲಪ್ಪ ಗೊಲ್ಲರ್ (10) ಮೃತಪಟ್ಟ ಬಾಲಕ.
ಮಾಜಿ ಶಾಸಕ ಮುನವಳ್ಳಿ ತಮ್ಮ ಬೆಂಬಲಿಗರೊಬ್ಬರು ಇಂದರಗಿ ತಾಂಡದಲ್ಲಿ ಮೃತಪಟ್ಟ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಬಾಲಕ ತನ್ನ ತಾತ ಮಲ್ಲಪ್ಪನೊಂದಿಗೆ ಊರಿಗೆ ತೆರಳಲು ಬಸ್ ನಿಲ್ದಾಣದಲ್ಲಿ ಕಾಯ್ದು ಕುಳಿತಿದ್ದಾಗ ಬಾಲಕ ಆಕಸ್ಮಿಕವಾಗಿ ಮಾಜಿ ಶಾಸಕ ಪ್ರಯಾಣಿಸುತ್ತಿದ್ದ ಕಾರಿಗೆ ಅಡ್ಡ ಬಂದ ಎಂದು ಪ್ರತ್ಯಕ್ಷದರ್ಶಿ ಮಲ್ಲಣ್ಣ ಸಾಗೆದ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.