ರಾಮನಗರ: ಜಿಲ್ಲೆಯಾದ್ಯಂತ ಶನಿವಾರ ವರುಣ ಆರ್ಭಟಿಸಿದ್ದು, ದಾಖಲೆಯ ಮಳೆಯಾಗಿದೆ. ಮಾಗಡಿ ತಾಲ್ಲೂಕಿನ ಪರಂಗಿಚಿಕ್ಕನಪಾಳ್ಯದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.
ಬಹುತೇಕ ಕೆರೆಗಳು ತುಂಬಿದ್ದು, ಕೋಡಿ ಬಿದ್ದಿದೆ. ಉಳಿದ ತಾಲ್ಲೂಕುಗಳಲ್ಲಿಯೂ ಭರ್ಜರಿ ಮಳೆ ಸುರಿದಿದೆ. ಮಾಗಡಿ-85 ಮಿಲಿಮೀಟರ್, ರಾಮನಗರ-79, ಕನಕಪುರ-56 ಹಾಗೂ ಚನ್ನಪಟ್ಟಣ ತಾಲ್ಲೂಕಿನಲ್ಲಿ 55ಮಿಲಿಮೀಟರ್ ನಷ್ಟು ಸರಾಸರಿ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.