ರಾಮನಗರ: ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಗುರುವಾರ ಸಂಜೆ ಚಿರತೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟರು.
ಗ್ರಾಮದ ಪುಟ್ಟಮ್ಮ (40) ಮೃತರು. ಅವರು ಹೊಲದಲ್ಲಿ ದನ ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿ ಕೊಂದು ಹಾಕಿತು ಎಂದು ಸ್ಥಳೀಯರು ತಿಳಿಸಿದರು.
ರಾಮನಗರ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು.
ಗುರುವಾರ ಬೆಳಿಗ್ಗೆ ಜಿಲ್ಲೆಯ ಕನಕಪುರ ತಾಲ್ಲೂಕಿನ ಚೌಕಸಂದ್ರ ಗ್ರಾಮದಲ್ಲಿ ಕರಡಿ ದಾಳಿಯಿಂದ ಸುಮಾ (22) ಎಂಬ ಗರ್ಭಿಣಿ ಮೃತಪಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.