ಶಿವಮೊಗ್ಗ: ಎರಡು ದಿನಗಳಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದರು. ಸುದ್ದಿಗಾರರ ಜತೆ ಶುಕ್ರವಾರ ಅವರು ಮಾತನಾಡಿದರು.
ಸಿದ್ದರಾಮಯ್ಯ ಅವರು ತಮ್ಮದು ಪ್ರಾಮಾಣಿಕ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರದು ತಲೆ ತಿರುಕ ಸರ್ಕಾರ. ಮುಖ್ಯಮಂತ್ರಿ ಸೇರಿದಂತೆ ಪ್ರಮುಖ ಸಚಿವರ ಭ್ರಷ್ಟಾಚಾರದ ದಾಖಲೆಗಳು ಲಭ್ಯವಾಗಿವೆ. ಬೆಂಗಳೂರಿನಲ್ಲಿ ಬಿಡುಗಡೆ ಮಾಡುತ್ತೇನೆ. ದಾಖಲೆ ಬಿಡುಗಡೆ ಮಾಡಿದ ನಂತರ ರಾಜ್ಯದ ಎಲ್ಲೆಡೆ ಹೋರಾಟ ಹಮ್ಮಿಕೊಂಡು ಸರ್ಕಾರದ ಬಣ್ಣ ಬಯಲು ಮಾಡಲಾಗುವುದು ಎಂದರು.
ಗಣಪತಿ ಪ್ರಕರಣದಲ್ಲಿ ಜಾರ್ಜ್, ದಕ್ಷಿಣ ಕನ್ನಡ ಪ್ರಕರಣದಲ್ಲಿ ರಮಾನಾಥ ರೈ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಶಾಸಕ ಜೀವರಾಜ್ ಅಪರಾಧವಾಗುವ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸಮರ್ಥಿಸಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.