ADVERTISEMENT

ದೇಶ ಸಧೃಡವಾಗಿಸಲು ಮೋದಿ ಶ್ರಮ: ಶಾಸಕ ಬಿ.ವೈ. ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2017, 9:37 IST
Last Updated 18 ಸೆಪ್ಟೆಂಬರ್ 2017, 9:37 IST

ಶಿಕಾರಿಪುರ:‘ದೇಶವನ್ನು ಸದೃಢವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರಮೋದಿ ಶ್ರಮಿಸುತ್ತಿದ್ದಾರೆ’ ಎಂದು ಶಾಸಕ ಬಿ.ವೈ.ರಾಘವೇಂದ್ರ ಹೇಳಿದರು. ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಭಾನುವಾರ ಪ್ರಧಾನಿ ನರೇಂದ್ರಮೋದಿ ಅವರ 67ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೇಶದ ಸ್ವಾಭಿಮಾನವನ್ನು ಕಾಪಾಡುವ ನಿಟ್ಟಿನಲ್ಲಿ ಅವರು ಆಡಳಿತ ನಡೆಸುತ್ತಿದ್ದಾರೆ. ದೇಶದ ನಿರುದ್ಯೋಗ ಸಮಸ್ಯೆ, ಕೃಷಿ ಹಾಗೂ ಭದ್ರತಾ ಕ್ಷೇತ್ರದ ಸಮಸ್ಯೆಗಳನ್ನು ನಿವಾರಿಸಲು ಶ್ರಮಿಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ಮುಖಂಡರಾದ ಕೆ.ಎಸ್.ಗುರುಮೂರ್ತಿ, ಕೆ.ಹಾಲಪ್ಪ, ಎಂ.ಬಿ.ಚನ್ನವೀರಪ್ಪ, ಜೆ.ಸುಕೇಂದ್ರಪ್ಪ, ಎಸ್‌.ಪಿ.ನಾಗರಾಜಗೌಡ್ರು, ಕಬಾಡಿರಾಜಪ್ಪ, ಬಿ.ಡಿ.ಭೂಕಾಂತ್, ರುದ್ರಮುನಿ, ಡಿ.ಎಲ್‌.ಬಸವರಾಜ್‌, ಚಾರಗಲ್ಲಿ ಪರಶುರಾಮ್‌, ರಹಮತ್‌ವುಲ್ಲಾ, ಸೈಯದ್‌ಫೀರ್, ಸಂದಿಮನಿ ಯೋಗೀಶ್‌, ಹಳ್ಳೇಣೆ ಗಿರೀಶ್‌, ಸುರೇಶ್‌, ಜಯಾನಾಯ್ಕ, ಸತೀಶ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.