ಶಿಕಾರಿಪುರ: ರಾಜ್ಯ ಸರ್ಕಾರ ಶೀಘ್ರ ತಾಲ್ಲೂಕು ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಮೆಕ್ಕೆಜೋಳ, ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.
ಸಮಯಕ್ಕೆ ಸರಿಯಾಗಿ ಮಳೆ ಬಾರದ ಕಾರಣ ತಾಲ್ಲೂಕಿನ ರೈತರು ಭತ್ತ ಬೆಳೆ ಬೆಳೆಯುವ ಬದಲು ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ. ತಾಲ್ಲೂಕಿನಲ್ಲಿ ಸುಮಾರು 25 ಸಾವಿರ ಎಕರೆಗೂ ಹೆಚ್ಚು ಕೃಷಿಭೂಮಿಯಲ್ಲಿ ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 1,425 ಕನಿಷ್ಠ ಬೆಲೆ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ಮೆಕ್ಕೆಜೋಳಕ್ಕೆ ₹ 400 ಪ್ರೋತ್ಸಾಹ ಧನ ನೀಡಬೇಕು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ರಾಜ್ಯದ ಎಪಿಎಂಸಿ ಮೂಲಕ ಸಂಗ್ರಹವಾಗಿರುವ ಕೋಟ್ಯಂತರ ರೂಪಾಯಿ ಆವರ್ತ ನಿಧಿಯನ್ನು ಸರ್ಕಾರ ಬಳಸಿಕೊಳ್ಳುವ ಮೂಲಕ ಮೆಕ್ಕೆಜೋಳಕ್ಕೆ ಪ್ರೋತ್ಸಾಹ ಧನ ನೀಡಬಹುದಾಗಿದೆ. ರೈತರು ತಾವು ಬೆಳೆದ ಮೆಕ್ಕೆಜೋಳವನ್ನು ಕಡಿಮೆ ಬೆಲೆಗೆ ಮಾರುವ ಬದಲು ರಾಜ್ಯ ಸರ್ಕಾರ ಪ್ರೋತ್ಸಾಹ ಧನ ಘೋಷಿಸುವವರೆಗೂ ಕಾಯಬೇಕು ಎಂದು ಸಲಹೆ ನೀಡಿದರು.
ಕಳೆದ ತಿಂಗಳ ಮಳೆಗೆ ತಾಲ್ಲೂಕಿನಲ್ಲಿ ಮೆಕ್ಕೆಜೋಳ ಹಾಗೂ ಅಡಿಕೆ ಬೆಳೆಗೆ ಹಾನಿಯಾಗಿದ್ದು, ರೈತರು ನಷ್ಟ ಅನುಭವಿಸಿದ್ದಾರೆ. ಹಾನಿಗೊಳದ ಈ ರೈತರಿಗೆ ಬೆಳೆ ಪರಿಹಾರ ಹಣವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠೀಯಲ್ಲಿ ಮುಖಂಡರಾದ ಕೆ.ಎಸ್. ಗುರುಮೂರ್ತಿ, ಮಾರವಳ್ಳಿ ಚಂದ್ರೇಗೌಡ್ರು, ಎಂ.ಬಿ. ಚನ್ನವೀರಪ್ಪ, ಜೆ. ಸುಕೇಂದ್ರಪ್ಪ, ಟಿ.ಎಸ್. ಮೋಹನ್, ತೊಗರ್ಸಿ ಸಣ್ಣಹನುಮಂತಪ್ಪ, ಕಬಾಡಿ ರಾಜಪ್ಪ, ವಸಂತಗೌಡ, ಸತೀಶ್ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.