ADVERTISEMENT

ಯುವಕರನ್ನು ಸೆಳೆಯಲು ರಾಹುಲ್‌ ಗಾಂಧಿ ಚಿಂತನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2017, 5:23 IST
Last Updated 22 ಡಿಸೆಂಬರ್ 2017, 5:23 IST
ಕೃಷ್ಣಭೈರೇಗೌಡ
ಕೃಷ್ಣಭೈರೇಗೌಡ   

ಶಿವಮೊಗ್ಗ: ಮಹಾದಾಯಿ ಯೋಜನೆಯ ವಿಷಯವನ್ನು ಬಿಜೆಪಿ ಕೇವಲ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈಗ ಇದರ ಬಗ್ಗೆ ಆಸಕ್ತಿ ವಹಿಸಿ, ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಮುಂಬರುವ ದಿನಗಳಲ್ಲಿ ರಾಜ್ಯದ ಯುವಕರನ್ನು ಸೆಳೆಯಲು ರಾಹುಲ್‌ ಗಾಂಧಿ ಚಿಂತನೆ ನಡೆಸಿದ್ದಾರೆ. ರಾಹುಲ್‌ ನೇತೃತ್ವದಲ್ಲಿ ಚುನಾವಣೆ ನಡೆಸಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳ ಮೂಲಕ ಮತ್ತೆ ಅಧಿಕಾರ ಪಡೆಯಲು ಯೋಜನೆ ರೂಪಿಸಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಪ್ರತ್ಯೇಕ ಪ್ರವಾಸ ಕೈಗೊಂಡಿರುವುದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ. ಸರ್ಕಾರ ಯೋಜನೆಯನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತ್ಯೇಕ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದರು.

ADVERTISEMENT

ಬಸ್‌ನಲ್ಲಿ ಬಂದ ಸಚಿವರು ನಗರದ ಕೃಷಿ ವಿವಿ ಘಟಿಕೋತ್ಸವ ಹಾಗೂ ಸಾವಯವ ಮೇಳದಲ್ಲಿ ಪಾಲ್ಗೊಳ್ಳಲು ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬಂದಿದ್ದು ವಿಶೇಷವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.