ADVERTISEMENT

ರಮ್ಯಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2017, 5:24 IST
Last Updated 7 ಆಗಸ್ಟ್ 2017, 5:24 IST
ರಮ್ಯಾ
ರಮ್ಯಾ   

ಶಿವಮೊಗ್ಗ: ತಾಲ್ಲೂಕಿನ ಪಿಳ್ಳಂಗಿರಿಯ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಎನ್.ರಮ್ಯಾ ಶಿವಮೊಗ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 4ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾಳೆ.

ಆಗಸ್ಟ್‌ 11ರಂದು ನಗರದ ಡಿವಿಎಸ್ ರಂಗಮಂದಿರದಲ್ಲಿ ಸಮ್ಮೇಳನ ನಡೆಯಲಿದೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾಳೆ. ಈಚೆಗೆ ನಡೆದ ಪ್ರಾಚ್ಯವಸ್ತು ಇಲಾಖೆಯ ಭಾಷಣ ಸ್ಫರ್ಧೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘ನಾ ಮೆಚ್ಚಿದ ಜಿಲ್ಲೆಯ ಸಾಹಿತಿ’ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾಳೆ.

ರಮ್ಯಾ ಮೀನುಗಾರಿಕೆ ವೃತ್ತಿ ನಡೆಸುವ ನಂಜುಂಡ ಹಾಗೂ ನಾಗಮ್ಮ ಅವರ ಪುತ್ರಿಯಾಗಿದ್ದಾಳೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.