ಶಿವಮೊಗ್ಗ: ಅರಣ್ಯ ಸಚಿವ ರಮಾನಾಥ ರೈ ಅವರಿಗೆ ಜವಾಬ್ದಾರಿಯುತ ಗೃಹ ಖಾತೆ ನೀಡಿದರೆ ‘ಕಳ್ಳನ ಕೈಗೆ ಬೀಗ ಕೊಟ್ಟಂತೆ’ ಆಗುತ್ತದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು. ಶಿವಮೊಗ್ಗದಲ್ಲಿ ಬುಧವಾರ ಅವರು ಮಾತನಾಡಿದರು.
‘ಗೃಹ ಖಾತೆ ಜವಾಬ್ದಾರಿ ನಿರ್ವಹಿಸುವ ವ್ಯಕ್ತಿ ಯಾವುದೇ ಪಕ್ಷ, ಜಾತಿ, ಧರ್ಮದ ಮೇಲೆ ಪ್ರೀತಿ ಹೊಂದಿರಬಾರದು. ಕಳಂಕಿತನಾಗಿರ ಬಾರದು. ರಮಾನಾಥ್ ರೈ ಅವರಿಗೆ ಇಂತಹ ಯಾವ ಯೋಗ್ಯತೆಯೂ ಇಲ್ಲ’ ಎಂದು ಆರೋಪಿಸಿದ್ದಾರೆ.
‘ಹಿಂದೆ ಪೊಲೀಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಬಂಟ್ವಾಳ ಪ್ರಕರಣಗಳಲ್ಲಿ ಸಮಯದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸು ವಂತೆ ಸೂಚನೆ ನೀಡಿದ್ದರು. ದಕ್ಷಿಣ ಕನ್ನಡದಲ್ಲಿ ರಾಜಕೀಯ ಮಾಡಿ ಕೊಂಡಿರುವ ಇಂಥವರಿಗೆ ಗೃಹ ಖಾತೆ ನೀಡಿದರೆ ನಿಷ್ಪಕ್ಷಪಾತ ಆಡಳಿತ ನೀಡಲು ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.