ಹೊಳೆಹೊನ್ನೂರು: ರೈತರು ಮತ್ತು ಕೃಷಿ ಚಟುವಟಿಕೆಗಳ ಸೇತುವೆಯಾಗಿ ರೈತ ಸಂಪರ್ಕ ಕೇಂದ್ರ ಕಾರ್ಯನಿರ್ವಹಿಸಬೇಕು ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ ತಿಳಿಸಿದರು. ಹೊಳೆಹೊನ್ನೂರಿನ ರೈತ ಸಂಪರ್ಕ ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಯವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ಸಾಮಗ್ರಿಗಳನ್ನು ಹಾಗೂ ಸಲಹೆಗಳನ್ನು ಫಲಾನುಭವಿಗಳಿಗೆ ಸಿಗುವಂತೆ ಮಾಡಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ರೇಖಾ ಉಮೇಶ್, ‘ದಿಢೀರ್ ಕಾರ್ಯಕ್ರಮ ಹಮ್ಮಿಕೊಂಡಿದ್ದರಿಂದ ಕೇವಲ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಸೇರಿದ್ದಾರೆ.
ರೈತ ಸಂಪರ್ಕ ಕೇಂದ್ರ ರೈತರ ಕಾರ್ಯಕ್ರಮವಾಗಿದೆ. ಅವರಿಲ್ಲದೇ ಕಾರ್ಯಕ್ರಮ ನಡೆಸಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ತಿಪ್ಪೇಶ್ರಾವ್, ಉಮೇಶ್, ಹೊಳೆಹೊನ್ನೂರು ಗ್ರಾಮ ಪಂಚಾಯ್ತಿ ಹಾಗೂ ಸುತ್ತಲಿನ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.