ADVERTISEMENT

ಪಾಲು ಕೇಳದ ಸಂಪತ್ತು ವಿದ್ಯೆ

ಮಧುಗಿರಿ ತಾಲ್ಲೂಕು ಭಗೀರಥ ಉಪ್ಪಾರರ ಜಾಗೃತಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2018, 9:03 IST
Last Updated 7 ಮಾರ್ಚ್ 2018, 9:03 IST

ಮಧುಗಿರಿ: ಆಸ್ತಿಯಲ್ಲಿ ಪಾಲು ಕೇಳ ಬಹುದು ಆದರೆ ವಿದ್ಯೆಯಲ್ಲಿ ಪಾಲು ಕೇಳಲು ಸಾಧ್ಯವಿಲ್ಲ ಎಂದು ಹೊಸದುರ್ಗ ಭಗೀರಥ ಪೀಠದ ಪುರುಷೋತ್ತಮಾನಂದ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಮಾಲಿ ಮರಿಯಪ್ಪ ರಂಗಮಂದಿರದಲ್ಲಿ ಭಗೀರಥ ಉಪ್ಪಾರರ ಕ್ಷೇಮಾಭಿವೃದ್ಧಿ ಸಂಘ ಮಂಗಳವಾರ ಹಮ್ಮಿಕೊಂಡಿದ್ದ ತಾಲ್ಲೂಕು ಭಗೀರಥ ಉಪ್ಪಾರರ ಜಾಗೃತಿ ಸಮಾವೇಶ ಹಾಗೂ ಶಾಸಕರಿಗೆ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸರ್ಕಾರ ಶಿಕ್ಷಣಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಬೇಕು ಎಂದರು.

ADVERTISEMENT

ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.