ADVERTISEMENT

ಮಾದಿಗರ ಕಡೆಗಣಿಸಿದ ಕಾಂಗ್ರೆಸ್; ದಸಂಸ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 10:30 IST
Last Updated 19 ಏಪ್ರಿಲ್ 2018, 10:30 IST

ತುಮಕೂರು: ಕಾಂಗ್ರೆಸ್‌ ಪ್ರಕಟಿಸಿರುವ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾವ ಕ್ಷೇತ್ರದಿಂದಲೂ ಮಾದಿಗ ಸಮುದಾಯದವರಿಗೆ ಟಿಕೆಟ್ ನೀಡಿಲ್ಲ. ಇದನ್ನು ದಲಿತ ಸಂಘರ್ಷ ಸಮಿತಿ ಖಂಡಿಸಲಿದ್ದು ಶೀಘ್ರದಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ ಎಂದು ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ ತಿಳಿಸಿದ್ದಾರೆ.

ಹಿಂದಿನಿಂದಲೂ ಕಾಂಗ್ರೆಸ್ ಮಾದಿಗ ಸಮುದಾಯವನ್ನು ಕಡೆಗಣಿಸುತ್ತಿದೆ. ಜಿಲ್ಲೆಯ ಎರಡ್ಮೂರು ಕ್ಷೇತ್ರಗಳಲ್ಲಿ ಮಾದಿಗ ಮತದಾರರು ಸಂಖ್ಯೆ ಹೆಚ್ಚಿದೆ. ಇಲ್ಲಿ ಒಂದು ಕಡೆಯಾದರೂ ಟಿಕೆಟ್ ನೀಡಬಹುದಿತ್ತು. ಬಿಜೆಪಿ ಕೊರಟಗೆರೆಯಲ್ಲಿ, ಜೆಡಿಎಸ್ ಪಾವಗಡದಲ್ಲಿ ಟಿಕೆಟ್ ನೀಡಿದೆ. ಕಾಂಗ್ರೆಸ್ ಮಾತ್ರ ಮಾದಿಗ ವಿರೋಧಿ ಎಂಬುದನ್ನು ತೋರಿಸಿದೆ ಎಂದಿದ್ದಾರೆ.

ಈ ಕುರಿತು ಚರ್ಚಿಸಲು ಸದ್ಯದಲ್ಲಿಯೇ ಮಾದಿಗರ ಮುಖಂಡರ ಸಭೆ ಕರೆಯಲಾಗುವುದು ಎಂದು ತಿಳಿದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.