ಕುಣಿಗಲ್: ತಾಲ್ಲೂಕಿನ ನೀರಾವರಿ ಮತ್ತು ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಅಭಿವೃದ್ಧಿಗಾಗಿ ರೈತ ಸಂಘದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಆನಂದ್ ಪಟೇಲ್ ಮನವಿ ಮಾಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ರೈತ ಮಹಿಳೆಯರ ಪೂರ್ಣಕುಂಭದೊಂದಿಗೆ ಮೆರವಣಿಗೆಯಲ್ಲಿ ಬಂದರು. ’ಕಾಂಗ್ರೆಸ್ ಅಭ್ಯರ್ಥಿ ಕನಕಪುರದ ಸಹೋದರರ ಆಜ್ಞಾಪಾಲಕಾರಾಗಿದ್ದಾರೆ. ಜೆಡಿಎಸ್ ತಾಲ್ಲೂಕಿನಲ್ಲೂ ಅಪ್ಪ ಮಕ್ಕಳ ಪಕ್ಷವಾಗಿದೆ. ಬಿಜೆಪಿ ಸಹ ಸಹೋದರನನ್ನು ಅನುಕರಣೆ ಮಾಡಿ ಅಧಿಕಾರಕ್ಕಾಗಿ ಮಾತ್ರವೇ ಹೊರತು ಅಭಿವೃದ್ಧಿಗಾಗಿ ಅಲ್ಲ. ತಾಲ್ಲೂಕಿನ ನೀರಾವರಿ, ರೈತ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡುತ್ತಿರುವ ರೈತ ಸಂಘಕ್ಕೆ ಅವಕಶ ಮಾಡಿಕೊಡಿ’ ಎಂದು ಮನವಿ ಮಾಡಿದರು
ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ್, ವೆಂಕಟೇಶ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.