ADVERTISEMENT

ಲಾರಿಗೆ ಕಾರು ಡಿಕ್ಕಿ; ಇಬ್ಬರ ಸಾವು

ನಗರದ ಹೊರ ವಲಯದ ಕೋರಾ ಸಮೀಪ ಘಟನೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2017, 10:24 IST
Last Updated 15 ಫೆಬ್ರುವರಿ 2017, 10:24 IST
ತುಮಕೂರು ನಗರದ ಹೊರ ವಲಯದ ಕೋರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು
ತುಮಕೂರು ನಗರದ ಹೊರ ವಲಯದ ಕೋರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು   

ತುಮಕೂರು: ನಗರದ ಹೊರ ವಲಯದ ಕೋರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ  ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ.

ಶಿರಾ ನಿವಾಸಿ ರಾಘವೇಂದ್ರ ಹಾಗೂ ಚಾಲಕ ಗುನ್ನಯ್ಯ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಚಿವ ಸತ್ಯನಾರಾಯಣ ಅವರ ಅಳಿಯ ರಾಘವೇಂದ್ರ ಹಾಗೂ ಮಧುಸೂದನ್ ಎಂಬುವರು ತೀವ್ರ ಗಾಯಗೊಂಡಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲರೂ ಶಿರಾದವರೇ ಆಗಿದ್ದಾರೆ. ದುಬೈ ಪ್ರವಾಸ ಮುಗಿಸಿಕೊಂಡು ಮಂಗಳವಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಕಾರಿನಲ್ಲಿ ಸ್ವಂತ ಊರು ಶಿರಾಕ್ಕೆ ಹೊರಟಿದ್ದಾಗ ಮುಂದೆ ಹೊರಟಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ಕೋರಾ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.