ADVERTISEMENT

ಉಡುಪಿ: ಧರ್ಮ ಸಂಸತ್‌ ಸಂತ ಸಮ್ಮೇಳನಕ್ಕೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2017, 9:57 IST
Last Updated 21 ನವೆಂಬರ್ 2017, 9:57 IST

ಉಡುಪಿ: ಇದೇ 24ರಿಂದ ಆರಂಭವಾಗಿ ಮೂರು ದಿನಗಳ ಕಾಲ ನಡೆಯುವ ಧರ್ಮ ಸಂಸತ್ ಸಂತರ ಸಮ್ಮೇಳನಕ್ಕೆ ಸಿದ್ಧತೆ ಭರದಿಂದ ನಡೆಯುತ್ತಿದೆ. ಸಮ್ಮೇಳನದ ಬಗ್ಗೆ ಮಾಹಿತಿ ನೀಡುವ ಬ್ಯಾನರ್‌, ಜಾಹೀರಾತು ಫಲಕ ಗಳು, ಹೋರ್ಡಿಂಗ್ಸ್‌ ನಗರದಲ್ಲಿ ರಾರಾಜಿಸತೊಡಗಿವೆ. ಕಾರ್ಕಳ, ಕುಂದಾಪುರ ನಗರ ಹಾಗೂ ಗ್ರಾಮಗಳಲ್ಲಿ ಸಹ ಅಳವಡಿಸ ಲಾಗಿದೆ. ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಜನರಿಗೆ ಮಾಹಿತಿ ನೀಡಲು ಭಾರಿ ಸಂಖ್ಯೆಯಲ್ಲಿ ಪ್ರಚಾರ ಸಾಮಗ್ರಿ ಬಳಸಲಾಗುತ್ತಿದೆ.

26ರಂದು ನಗರದ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಅದರ ಬಗ್ಗೆ ಮಾಹಿತಿ ಹಾಗೂ ಆಹ್ವಾನ ನೀಡುವ ಜಾಹೀರಾತು ಫಲಕಗಳು ಹೆಚ್ಚಿನ ಸಂಖ್ಯೆಯಲ್ಲಿವೆ.ಪ್ರಚಾರಕ್ಕೆಂದೇ ವಿನ್ಯಾಸಗೊಳಿಸಿದ್ದ ‘ಸುಧರ್ಮ ರಥ’ ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿದೆ. ಸುಮಾರು ಒಂದೂವರೆ ಲಕ್ಷ ಜನರು ಸಮಾಜೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 2 ಸಾವಿರ ಸಂತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT