ಬ್ರಹ್ಮಾವರ: ಹಾರಾಡಿಯ ಡಾ.ಎ.ವಿ. ಬಾಳಿಗಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಎನ್ ಎಸ್ಎಸ್ ರಾಜ್ಯ ಸಂಯೋಜನಾಧಿಕಾರಿ ಕೃಷ್ಣ ಪರಮಾತ್ಮ ಮತ್ತು ಮೈಸೂರು ವಿಭಾಗದ ಸಹಾಯಕ ಸಂಯೋಜನಾ ಧಿಕಾರಿ ಸಿ.ಆರ್.ದಿನೇಶ್ ಭೇಟಿ ನೀಡಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲೆ ತಾರಾ ದೇವಿ, ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಸವಿತಾ, ಸಂಪನ್ಮೂಲ ವ್ಯಕ್ತಿ ವಕೀಲ ಸಿ.ಅಶೋಕ್ ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಶ್ಯಾನು ಭಾಗ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಉದ್ಯಮಿ ರಾಜೀವ ಆಳ್ವ, ಹಾರಾಡಿ ಪಂಚಾಯಿತಿ ಸದಸ್ಯೆ ಪುಷ್ಪಾ, ಡಾ.ಎ.ವಿ. ಬಾಳಿಗಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜಪ್ಪ ದ್ಯಾ.ಗೋಣಿ, ಎನ್ಎಸ್ಎಸ್ ಅಧಿಕಾರಿ ಎಂ.ನವೀನ್ ಕುಮಾರ್ ಮತ್ತು ಕಾಲೇಜು ಸಿಬ್ಬಂದಿ ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.