ADVERTISEMENT

ಕಾಂಗ್ರೆಸ್ ಗೆಲ್ಲಿಸಲು ಕಾರ್ಯಕರ್ತರು ಕಟಿಬದ್ಧ: ಬಾವ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2017, 9:39 IST
Last Updated 28 ನವೆಂಬರ್ 2017, 9:39 IST

ಕಾರ್ಕಳ: ‘ಯಾವುದೇ ಬೆಲೆ ತೆತ್ತಾದರೂ ಸರಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯ ಕರ್ತರು ಸಿದ್ಧರಾಗಿದ್ದಾರೆ’ ಎಂದು ಕೆಪಿಸಿಸಿ ಉಸ್ತುವಾರಿ ಉಡುಪಿ ಜಿಲ್ಲಾ ವೀಕ್ಷಕ ಜಿ.ಎ. ಬಾವ ಹೇಳಿದರು.

ತಾಲ್ಲೂಕಿನ ಹಿರ್ಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯ ಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳು ಜನರನ್ನು ತಲುಪಿವೆ. ಕ್ಷೇತ್ರದಲ್ಲಿ ಅಭ್ಯರ್ಥಿಯ ಬಗ್ಗೆ ಯಾವುದೇ ಗೊಂದಲವಿಲ್ಲ, ಹೈಕಮಾಂಡ್ ತನ್ನ ಸಾಂವಿಧಾನಿಕ ವ್ಯಾಪ್ತಿಯಲ್ಲಿ ಆಯ್ಕೆ ಮಾಡುವ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಕಟಿಬದ್ಧರಾಗಿದ್ದಾರೆ ಎಂದರು.

ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಸದಸ್ಯ ಶಿರಿಯಣ್ಣ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಗ್ರಾಮ ಅಧ್ಯಕ್ಷ ಚೇತನ್ ಶೆಟ್ಟಿ, ವಕ್ತಾರ ನಕ್ರೆ ಬಿಪಿನಚಂದ್ರ ಪಾಲ್, ಪಕ್ಷದ
ವಿವಿಧ ಘಟಕಗಳ ಅಧ್ಯಕ್ಷರು ಪಂಚಾಯಿತಿ ಸದಸ್ಯರು ಉಪಸ್ಥಿತ ರಿದ್ದರು. ಸಂತೋಷ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.