ಬೈಂದೂರು : ಖಂಬದಕೋಣೆಯ ಸಂವೇದನಾ ಪದವಿ ಕಾಲೇಜಿನ ಬಳಿ ಹೆದ್ದಾರಿಯಲ್ಲಿ ಶನಿವಾರ ಮಗುಚಿ, ಇಬ್ಬರು ಗಾಯಗೊಂಡರು. ಗಾಯಾಳುಗಳನ್ನು ಚಾಲಕ ಫೈಸಲ್ ಮತ್ತು ಅವರ ಸ್ನೇಹಿತ ಎಂದು ಗುರುತಿಸಲಾಗಿದೆ. ಅವರು ಕಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರು ಬೈಂದೂರು ಕಡೆಯಿಂದ ಮಂಗಳೂರಿಗೆ ಹೋಗುತ್ತಿತ್ತು. ಚಾಲಕ ನಿದ್ದೆಯ ಮಂಪರಿಗೊಳಗಾದಾಗ ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು ಮಗುಚಿಕೊಂಡಿತು ಎನ್ನಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.