ADVERTISEMENT

ಕೃಷಿ ಭೂಮಿ ಖರೀದಿ

​ಪ್ರಜಾವಾಣಿ ವಾರ್ತೆ
Published 22 ಮೇ 2017, 5:46 IST
Last Updated 22 ಮೇ 2017, 5:46 IST

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಭೂ ಒಡೆತನ ಯೋಜನೆಯಡಿ 2016–17ನೇ ಸಾಲಿನಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಪಂಗಡದವರಿಗೆ ಕೃಷಿ ಭೂಮಿಯನ್ನು ಮಂಜೂರು ಮಾಡಬೇಕಾಗಿದ್ದು, ಅದಕ್ಕಾಗಿ ನಿಗಮ ಭೂಮಿ ಖರೀದಿಸಲು ಮುಂದಾಗಿದೆ.

ಜಮೀನು ಮಾರಾಟ ಮಾಡಲು ಇಚ್ಛೆಯಿದ್ದಲ್ಲಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ. ಬ್ಲಾಕ್‌, 2ನೇ ಮಹಡಿ, ಕೊಠಡಿ ಸಂಖ್ಯೆ 302, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ– 576104 ಈ ವಿಳಾಸವನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.