ADVERTISEMENT

ಟಿಪ್ಪು ಜಯಂತಿ: 8ರಿಂದ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2017, 9:41 IST
Last Updated 7 ನವೆಂಬರ್ 2017, 9:41 IST

ಉಡುಪಿ: ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಇದೇ 8ರಂದು ಬೆಳಿಗ್ಗೆ 6 ಗಂಟೆಯಿಂದ 11ರ ಬೆಳಿಗ್ಗೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.

ಟಿಪ್ಪು ಜಯಂತಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ, ಇದರಿಂದಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸರ್ಕಾರಿ ಕಾರ್ಯಕ್ರಮಗಳು ನಡೆಯುವ ಸ್ಥಳಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.