ADVERTISEMENT

ನೀತಿ ಸಂಹಿತೆ– ಭಯದ ಸ್ಥಿತಿ ಇದೆ: ಮಧ್ವರಾಜ್

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 9:20 IST
Last Updated 19 ಏಪ್ರಿಲ್ 2018, 9:20 IST

ಉಡುಪಿ: ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ಜನರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಕ್ರೀಡೆ ಮತ್ತು ಯುವ ಸಬಲೀ ಕರಣ ಸಚಿವ ಪ್ರಮೋದ್ ಮಧ್ವರಾಜ್ ಅಸಮಾಧಾನ ವ್ಯಕ್ತಪಡಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ– ಮದ್ಯ ಹಂಚಿಕೆಗೆ ಕಡಿವಾಣ ಹಾಕಿದರೆ ಅಭ್ಯಂತರ ಇಲ್ಲ. ಆದರೆ ಜನ ಸಾಮಾನ್ಯರ ದೈನಂದಿನ ಚಟುವಟಿಕೆ ಗಳಿಗೆ ಅಡಚಣೆ ಮಾಡುವಂತಹ ಕ್ರಮ ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದು ಒಂದು ಸಂಭ್ರಮ ಇದ್ದಂತೆ. ಅದಕ್ಕೆ ತಡೆಯೊಡ್ಡಲಾಗುತ್ತಿದೆ. ಯಾವು ದೇ ಕಾರ್ಯಕ್ರಮ ಇದ್ದರೂ 48 ಗಂಟೆ ಮೊದಲು ಅನುಮತಿ ಪಡೆಯಿರಿ ಎಂದು ಹೇಳುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT