ADVERTISEMENT

ಪೇಜಾವರ ವಿರುದ್ಧ ಪ್ರತಿಭಟನೆ ಹಿಂದೆ ಕಾಂಗ್ರೆಸ್: ಯಶ್‌ಪಾಲ್ ಸುವರ್ಣ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 5:26 IST
Last Updated 29 ನವೆಂಬರ್ 2017, 5:26 IST

ಉಡುಪಿ: ‘ಪೇಜಾವರ ಸ್ವಾಮೀಜಿ ಅವರ ಹಿಂದೆ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್‌ ಸರ್ಕಾರ ಮತ್ತು ಬುದ್ಧಿಜೀವಿಗಳ ಕೈವಾಡ ಇದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಯಶ್‌ಪಾಸ್‌ ಸುವರ್ಣ ಗಂಭೀರ ಆರೋಪ ಮಾಡಿದ್ದಾರೆ.

‘ಧರ್ಮ ಸಂಸತ್‌ಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲವನ್ನು ಅರಗಿಸಿಕೊಳ್ಳಲಾಗದೆ ಇಂತಹ ವಾಮ ಮಾರ್ಗ ಅನುಸರಿಸುತ್ತಿದ್ದಾರೆ. ರಾಜಕೀಯ ಕಾರಣಗಳಿಗಾಗಿ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅವರು ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತರ ಮಧ್ಯೆ ಸರ್ಕಾರ ಮಾಡುತ್ತಿರುವ ತಾರತಮ್ಯವನ್ನು ಸ್ವಾಮೀಜಿ ಖಂಡಿಸಿದ್ದಾರೆ. ದಲಿತರು ಅಥವಾ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿಲ್ಲ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.