ಉಡುಪಿ: ಹಿಂದೂ ಮತ್ತು ಮುಸ್ಲಿಮರನ್ನು ಒಡೆಯುವ ಕುತಂತ್ರದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, ಮುಸ್ಲಿಮರೆಲ್ಲರೂ ದೇಶದ್ರೋಹಿಗಳಲ್ಲ. ಕೆಎಫ್ಡಿ ಅಂತಹ ಸಂಘಟನೆ ಹಿಂದೂಗಳನ್ನು ಕೊಲ್ಲುವ ಕೆಲಸ ಮಾಡುತ್ತಿದೆ, ದೇಶದ್ರೋಹಿ ಚಟುವಟಿಕೆಯಲ್ಲಿಯೂ ತೊಡಗಿದೆ. ಬಿಜೆಪಿಯ ಹೋರಾಟವನ್ನು ತಡೆಯಲು ಕಾಂಗ್ರೆಸ್ ಪ್ರಯತ್ನಿಸಿತು. ಹೋರಾಟವನ್ನು ಯಶಸ್ವಿಗೊಳಿಸಿದ ಸಾವಿರಾರು ಯುವಕರು ದೇಶದ್ರೋಹಿ ಕೆಲಸವನ್ನು ಸಹಿಸೋದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಸಾವರ್ಕರ್ ಹೋರಾಟದ ಸ್ಫೂರ್ತಿ ತೋರಿದ್ದಾರೆ ಎಂದರು.
ಬಿಜೆಪಿ ಬ್ರಾಹ್ಮಣರ ಪಕ್ಷ, ಮೇಲ್ವರ್ಗದವರ ಪಕ್ಷ, ಉತ್ತರ ಭಾರತದ ಪಕ್ಷ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿತು. ಆದರೆ, ಜನರು ಅದಕ್ಕೆ ಮನ್ನಣೆ ನೀಡಲಿಲ್ಲ. ಆರ್ಎಸ್ಎಸ್ ಅನ್ನು ಮುಗಿಸುವುದಾಗಿ ರಾಹುಲ್ ಗಾಂಧಿ ಅವರ ತಂದೆ, ಅಜ್ಜಿ ಹೇಳಿದ್ದರು. ಆದರೆ, ಅವರಿಂದ ಆಗಲಿಲ್ಲ. ಇನ್ನು ರಾಹುಲ್ ಅವರಿಂದ ಸಾಧ್ಯವೇ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಇರುವುದು ಕೊಲೆಗಡುಕರ ಸರ್ಕಾರ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.