ADVERTISEMENT

‘ಸೋಲು ತಾತ್ಕಾಲಿಕ, ಗೆಲುವು ಶಾಶ್ವತ’

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2014, 4:45 IST
Last Updated 22 ಸೆಪ್ಟೆಂಬರ್ 2014, 4:45 IST

ಕಾರ್ಕಳ: ಸೋಲು ಎಂಬುದು ತಾತ್ಕಾಲಿಕ, ಗೆಲುವು ಎಂಬುದು ಶಾಶ್ವತ ಎಂದು ಇಲ್ಲಿ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜಿ.ಎನ್.ಭಟ್ ತಿಳಿಸಿದರು.

ಇಲ್ಲಿನ ಭುವನೇಂದ್ರ ಕಾಲೇಜಿನ ರಾಮಕೃಷ್ಣ ಸಭಾಂಗಣದಲ್ಲಿ ಕಾಲೇಜಿನ ವಿಜ್ಞಾನ ಸಂಘ ಆಯೋಜಿಸಿದ `ಪರೀಕ್ಷಾ ಭಯ ಹೋಗಲಾಡಿಸುವುದು ಹೇಗೆ?' ಎಂಬ ವಿಷಯದ ಕುರಿತು ಮಾತನಾಡಿದ ಅವರು ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು.

ಆತ್ಮವಿಶ್ವಾಸವಿದ್ದರೆ ಗೆಲುವು ಸಾಧ್ಯ. ವಿದ್ಯಾರ್ಥಿಗಳು ಪರೀಕ್ಷೆ ಹತ್ತಿರ ಬಂದಾಗ ಮಾತ್ರ ಸಿದ್ಧತೆ ಮಾಡಿಕೊಳ್ಳದೆ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ದೃಢ ನಿರ್ಧಾರದ ಮೂಲಕ ಮಾತ್ರವೇ ಯಾವುದೇ ಭಯವಿಲ್ಲದೆ ಪರೀಕ್ಷೆ ಎದುರಿಸಲು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಪಿ.ವೆಂಕಟ್ರಮಣಗೌಡ ಉಪಸ್ಥಿತರಿದ್ದರು. ವಿಜ್ಞಾನ ಸಂಘದ ಸಂಯೋಜಕ ರಮೇಶ್ ಭಟ್ ಎಂ ಸ್ವಾಗತಿಸಿದರು. ಪ್ರತಿಮಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.