ADVERTISEMENT

ಇಂದು ಕರಾವಳಿಗೆ ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 7:06 IST
Last Updated 19 ಫೆಬ್ರುವರಿ 2018, 7:06 IST
ಅಮಿತ್‌ ಶಾ
ಅಮಿತ್‌ ಶಾ   

ಸಂಜೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಮೂಲಕ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮೂರು ದಿನಗಳ ಪ್ರವಾಸ ಆರಂಭ ರಾತ್ರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ. ಮಂಗಳವಾರ ಕುಕ್ಕೆ ದೇವರ ದರ್ಶನ ಪಡೆದು, ಕುಲ್ಕುಂದದಲ್ಲಿ ನಡೆಯುವ ಸುಳ್ಯ ವಿಧಾನಸಭಾ ಕ್ಷೇತ್ರದ 8 ಶಕ್ತಿ ಕೇಂದ್ರಗಳಿಂದ 224 ಬೂತಿನ ತಲಾ 9 ‘ನವರತ್ನ’ಗಳನ್ನು ಉದ್ದೇಶಿಸಿ ಮಾತನಾಡುವರು.

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ, ಬಿ.ಸಿ.ರೋಡ್‌ನಲ್ಲಿ ಸಮಾವೇಶ ಸುರತ್ಕಲ್‌ ಸಮೀಪದ ಕಾಟಿಪಳ್ಳದ ದೀಪಕ್‌ ರಾವ್‌ ಮನೆಗೆ ಭೇಟಿ ಸಂಜೆ 4 ಗಂಟೆಗೆ ಮಲ್ಪೆಯಲ್ಲಿ ನಡೆಯುವ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಾವೇಶ ಉದ್ಘಾಟನೆ.

21ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಪ್ರಮುಖರೊಂದಿಗೆ ಸಂವಾದ ಬಳಿಕ ಶಾ ಉತ್ತರ ಕನ್ನಡ ಜಿಲ್ಲೆಗೆ ತೆರಳುವರು ಹೊನ್ನಾವರದಲ್ಲಿ ಪರೇಶ್‌ ಮೇಸ್ತ ಮನೆಗೆ ತೆರಳುವ ನಿರೀಕ್ಷೆ ಇದೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.