ಜೊಯಿಡಾ(ದಾಂಡೇಲಿ): ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಲಿ ಯುವ ವಿದ್ಯಾರ್ಥಿಗಳಿಗಾಗಿ 500 ಹಾಸಿಗೆ, 600 ಬ್ಯಾಗ್ ವಿತರಿಸಲಾಗಿದೆ ಎಂದರು. ದೇವರಾಜ ಅರಸು ಸಮುದಾಯ ಭವನಕ್ಕೆ ₹ 1 ಕೋಟಿ ಮಂಜೂರಿಯಾಗಿದ್ದು ತಾಲ್ಲೂಕಿನ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಯುಗ ಪ್ರಾರಂಭವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಭತ್ತದ ಹುಲ್ಲಿನ ಭಣವೆ ಸುಟ್ಟ ಭಾಮಣಗಿಯ ಸೀತಾರಾಮ ಮಿರಾಶಿಯವರಿಗೆ ₹ 10 ಸಾವಿರ ಚೆಕ್ ವಿತರಿಸಲಾಯಿತು. ರಿಯಾಯತಿ ದರದಲ್ಲಿ ಧಾನ್ಯ ಸಂಗ್ರಹಣಾ ಪೆಟ್ಟಿಗೆಯನ್ನು ಶಾಂತಾ ಹರಿಜನ, ಗಣಪತಿ ಹರಿಜನ, ಬಂಡು ಗಾಂಜೇಕರ ಅವರಿಗೆ ವಿತರಿಸಲಾಯಿತು. ತುಕಾರಾಮ ಪಾಂಡುರಂಗ ನಾಯ್ಕ ಅವರಿಗೆ ಕೃಷಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಣ ಇಲಾಖೆಯಿಂದ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನರ್ಮದಾ ಪಾಟ್ನೆಕರ, ಜಿಲ್ಲಾ ಪಂಚಾಯ್ತಿ ಸದಸ್ಯ ರಮೇಶ ನಾಯ್ಕ, ಸಂಜಯ ಹಣಬರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶೈಲಾ ಶ್ರೀಕಾಂತ ನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯ ದೇಸಾಯಿ, ತಹಶೀಲ್ದಾರ್ ಟಿ.ಸಿ.ಹಾದಿಮನಿ ಇತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.