ಗೋಕರ್ಣ: ಇಲ್ಲಿಯ ಮುಖ್ಯ ಕಡಲತೀರದಲ್ಲಿರುವ ರಾಮತೀರ್ಥದ ಬಳಿ ಮಂಗಳವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
‘ಈ ವೇಳೆ ಆಟೊದೊಳಗೆ ಪ್ರಯಾಣಿಕರು ಇರಲಿಲ್ಲ. ಅಪಾಯವನ್ನು ಅರಿತ ಚಾಲಕ ರಿಕ್ಷಾದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ’ ಎಂದು ಸ್ಥಳೀಯರು ಮಾಹಿತಿ ನೀಡಿದರು.
ಆದರೆ ಈ ಆಟೊ ಯಾರಿಗೆ ಸೇರಿದ್ದು, ಚಾಲಕ ಯಾರು ಎಂದು ತಿಳಿದುಬಂದಿಲ್ಲ. ಕ್ರೇನ್ ಮೂಲಕ ರಿಕ್ಷಾವನ್ನು ಮೇಲಕ್ಕೆ ಎತ್ತಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.