ADVERTISEMENT

‘ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೆ ರಾಜಕಾರಣಕ್ಕೆ’

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2017, 9:02 IST
Last Updated 13 ನವೆಂಬರ್ 2017, 9:02 IST
ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಆನಂದ ಅಸ್ನೋಟಿಕರ್‌
ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಆನಂದ ಅಸ್ನೋಟಿಕರ್‌   

ಕಾರವಾರ: ಕಾರವಾರ–ಅಂಕೋಲಾ ಕ್ಷೇತ್ರದ ಅಭಿವೃದ್ಧಿಗಾಗಿ, ತಾವು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವುದಾಗಿ ಮಾಜಿ ಸಚಿವ ಆನಂದ ಅಸ್ನೋಟಿಕರ್‌ ಭಾನುವಾರ ಇಲ್ಲಿ ಪ್ರಕಟಿಸಿದರು.= ರಾಜಕೀಯ ಮರುಪ್ರವೇಶಕ್ಕೆ ಒತ್ತಾಯಿಸಿ ಅವರ ಮನೆ ಮುಂದೆ ನೆರೆದಿದ್ದ ನೂರಾರು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೇ 15ರ ನಂತರ ಕ್ಷೇತ್ರದಲ್ಲಿ ಸಂಚರಿಸಿ, ಹಿರಿಯರ ಅಭಿಪ್ರಾಯ ಪಡೆದು ಮುಂದಡಿ ಇಡುವುದಾಗಿ ತಿಳಿಸಿದರು.

ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸುವುದಾಗಿ ಹೇಳಿದರು. ‘ನಾಲ್ಕೂವರೆ ವರ್ಷಗಳಿಂದ ಪಕ್ಷದ ಹಾಗೂ ಯಾವ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ನಾನು ಕಾಣಿಸಿಕೊಂಡಿರಲಿಲ್ಲ.

ನನ್ನ ಅವಧಿಯಲ್ಲಿ ಹಲವಾರು ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಮುಂದಿನ ಚುನಾವಣೆಗೆ ಸ್ಪರ್ಧಿಸಲು, ಅಭಿಮಾನಿಗಳನ್ನು ಎದುರಿಸಲು ಧೈರ್ಯ ಇರಲಿಲ್ಲ. ಆದರೆ ಈ ಜನಸಾಗರವನ್ನು ನೋಡಿ ಈಗ ಧೈರ್ಯ ಬರುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.