ಕಾರವಾರ: ತಾಲ್ಲೂಕಿನ ಅಮದಳ್ಳಿಯ ಟೋಲ್ನಾಕಾದ ಕೃಷ್ಣ ಮಹಾದೇವ ಚಿಂಚಣಕರ ಅವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ 3 ಎಮ್ಮೆ ಕರುಗಳ ಮೇಲೆ ಬುಧವಾರ ರಾತ್ರಿ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.
ಒಂದು ಎಮ್ಮೆ ಕರುವನ್ನು ಅರ್ಧಂಬರ್ಧ ತಿಂದು ಹಾಕಿದ್ದು, ಇನ್ನೆರಡನ್ನು ಸಾಯಿಸಿ ಹಾಗೆ ಬಿಟ್ಟಿದೆ. ಈ ಭಾಗದಲ್ಲಿ ಪದೇ ಪದೇ ಚಿರತೆ ದಾಳಿ ನಡೆಸುತ್ತಿದ್ದು, ಸ್ಥಳೀಯರು ಆತಂಕ ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.